# Tags

*ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್..ನೂಪುರ್ ಸನೋನ್ ಜೊತೆ ಹೆಜ್ಜೆ ಹಾಕಿದ ಮಾಸ್ ಮಹಾರಾಜ ರವಿತೇಜ*

ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್ ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.    70ರ ಕಾಲಘಟ್ಟದ ಹೈದ್ರಾಬಾದ್ ದ […]

ಬಿಡುಗಡೆಯಾಯ್ತು ಬಹುನಿರೀಕ್ಷಿತ `ಅಭಿರಾಮಚಂದ್ರ’ ಚಿತ್ರದ `ಒಂಟಿ ಪಯಣಿಗ’ ಹಾಡು

ಈಗಾಗಲೇ ಸದ್ದಿಲ್ಲದೆ ತನ್ನ ಶೂಟಿಂಗ್‌ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ `ಅಭಿರಾಮಚಂದ್ರ’ದ ಬಿಡುಗಡೆಗೆ ಸೆನ್ಸಾರ್‌ ಮಂಡಳಿಯಲ್ಲಿ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇತ್ತೀಚೆಗಷ್ಟೇ “ಅಭಿರಾಮಚಂದ್ರ’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ. ಸೆನ್ಸಾರ್‌ನ ಬೆನ್ನಹಿಂದೆಯೇ.. ಚಿತ್ರ ತಂಡ `ಒಂಟಿ ಪಯಣಿಗ’ ಅನ್ನುವ ಹಾಡನ್ನು ರಿಲೀಸ್ ಮಾಡಿದೆ. ವಾಸುಕಿ ವೈಭವ್ ಕಂಠಸಿರಿಯಲ್ಲಿ ಮೂಡಿ ಬಂದ ಈ ಹಾಡಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ರವಿ ಬಸ್ರೂರು ಅವರ ಮಗ, ರವಿ […]

ಸೆನ್ಸಾರ್ ಪಾಸಾದ ‘ಲೈನ್‌ ಮ್ಯಾನ್‌’ಗೆ ಸಿಕ್ತು ಯು ಸರ್ಟಿಫಿಕೇಟ್

ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ಈ ಚಿತ್ರದ ಸಾರಥಿ. ಈಗಾಗಲೇ ಶೂಟಿಂಗ್ ಮುಗಿಸಿರುವ ಲೈನ್ ಮ್ಯಾನ್ ಸೆನ್ಸಾರ್ ಪಾಸಾಗಿದ್ದು, ಯು ಸರ್ಟಿಫಿಕೇಟ್ ಸಿಕ್ಕಿದೆ.   ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ಲೈನ್ ಮ್ಯಾನ್ ಸಿನಿಮಾಗೆ ತ್ರಿಗುಣ್ ನಾಯಕ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲವು […]

ಸೆನ್ಸಾರ್ ಪಾಸಾಯ್ತು ಶಿವಣ್ಣ ಸಾಥ್ ನೀಡಿದ್ದ ‘ಅಭಿರಾಮಚಂದ್ರ’

ಈಗಾಗಲೇ ಸದ್ದಿಲ್ಲದೆ ತನ್ನ ಶೂಟಿಂಗ್‌ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಅಭಿರಾಮಚಂದ್ರ’ದ ಬಿಡುಗಡೆಗೆ ಸೆನ್ಸಾರ್‌ ಮಂಡಳಿಯಲ್ಲಿ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇತ್ತೀಚೆಗಷ್ಟೇ “ಅಭಿರಾಮಚಂದ್ರ’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದಲ್ಲಿ ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಶಿವಾನಿ ರೈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವೀಣಾ ಸುಂದರ್‌, […]

ಸೆ.15ಕ್ಕೆ ಭಾವೈಕ್ಯತೆಯ ಸುತ್ತ “13”ರ ಚಿತ್ತ….

ಹಿರಿಯ ಕಲಾವಿದರಾದ ರಾಘವೇದ್ರ ರಾಜ್‌ಕುಮಾರ್, ಶೃತಿ ಹಾಗೂ ಪ್ರಮೋದ್ ಶೆಟ್ಟಿ ‌ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಭಾವೈಕ್ಯತೆಯ ಸಂದೇಶ ಸಾರುವ, ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ “13”. ಇದೇ ತಿಂಗಳ 15ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆ ಕಾಣುತ್ತಿರುವ ಈ ಚಿತ್ರದಲ್ಲಿ ರಾಘಣ್ಣ ಅವರು ಮೋಹನ್‌ ಕುಮಾರ್ ಎಂಬ ಹಿಂದೂ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರೆ, ನಟಿ ಶೃತಿ ಅವರು ಸಾಹಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ಬಿಡುಗಡೆಯ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ ಚಿತ್ರತಂಡ […]

“ಉಸಿರೇ ಉಸಿರೇ” ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

  “ಉಸಿರೇ ಉಸಿರೇ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ ಇದೊಂದು ನವೀರದ ಪ್ರೇಮಕಥೆ ಎನ್ನುವ ನಿರ್ಮಾಪಕ ಪ್ರದೀಪ್ ಯಾದವ್, ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ […]

Translate »