# Tags

ಕಲರ್ಸ್‌ ಕನ್ನಡದಲ್ಲಿ ಇನ್ಮುಂದೆ ಪ್ರತಿದಿನವೂ ಸೀರಿಯಲ್‌ ಮನರಂಜನೆ..!

ಕಲರ್ಸ್‌ ಕನ್ನಡದಲ್ಲಿ ಒಂದೊಂದು ಧಾರಾವಾಹಿಯೂ ವಿಭಿನ್ನ ಕಥೆ, ಕುತೂಹಲವನ್ನು ಹೊಂದಿವೆ. ಪ್ರತಿದಿನ ರೋಚಕ ಟ್ವಿಸ್ಟ್‌ಗಳನ್ನು ನೀಡುತ್ತಿದೆ. ಎಲ್ಲಾ ಧಾರಾವಾಹಿಗೂ ಅಭಿಮಾನಿ ಬಳಗವೇ ಇದೆ. ಇಷ್ಟು ದಿನ ಸೋಮವಾರದಿಂದ ಶುಕ್ರವಾರದವರೆಗೂ ಮಾತ್ರ ಧಾರಾವಾಹಿ ಪ್ರಸಾರವಾಗುತ್ತಿತ್ತು. ಆದರೆ ಇನ್ಮುಂದೆ ಇಡೀ ವಾರ ಧಾರಾವಾಹಿ ಪ್ರಸಾರವಾಗಲಿದೆ. ಶುಕ್ರವಾರ ಕೊಟ್ಟ ಟ್ವಿಸ್ಟ್‌ನಿಂದ ಉತ್ತರಕ್ಕಾಗಿ ಸೋಮವಾರದವರೆಗೂ ಕಾಯುವ ಅವಶ್ಯಕತೆ ಇರುವುದಿಲ್ಲ. ಕರಿಮಣಿ, ಭಾಗ್ಯಲಕ್ಷ್ಮೀ, ಲಕ್ಷ್ಮೀ ಬಾರಮ್ಮ, ಶ್ರೀಗೌರಿ, ದೃಷ್ಟಿಬೊಟ್ಟು, ನಿನಗಾಗಿ ಎಲ್ಲಾ ಧಾರಾವಾಹಿಗಳು ವಾರವಿಡಿ ರಂಜಿಸಲಿದೆ. ಇದು ವೀಕ್ಷಕರಿಗೆ ಸಹಜವಾಗಿಯೇ ಖುಷಿ ಕೊಟ್ಟಿದೆ. ಬರುತ್ತಿರುವ […]

‘ಮರ್ಯಾದೆ ಪ್ರಶ್ನೆ’ಗೆ ಕಿಚ್ಚ ಸಾಥ್ ಹದಿನಾರು ಪ್ರತಿಭಾವಂತ ನಿರ್ದೇಶಕರಿಗೆ ವೇದಿಕೆಯಾದ `ಮರ್ಯಾದೆ ಪ್ರಶ್ನೆ’ ಚಿತ್ರ ತಂಡ

ರಿಯಲಿಸ್ಟಿಕ್ ರಿವೆಂಜ್ ಡ್ರಾಮಾ ‘ಮರ್ಯಾದೆ ಪ್ರಶ್ನೆ’ ಚಿತ್ರದ ಟ್ರೇಲರನ್ನು ಅಭಿನಯ ಚಕ್ರವರ್ತಿ ‘ಕಿಚ್ಚ ಸುದೀಪ್’ ಬಿಡುಗಡೆ ಮಾಡಿ “ಟ್ರೇಲರ್ ನನಗೆ ತುಂಬಾ ಇಷ್ಟವಾಯಿತು. ಸಾಕಷ್ಟು ವಿಚಾರ ತಿಳಿಸಿಯೂ ಕೂಡ ಕುತೂಹಲ ಹುಟ್ಟಿಸುವಂತೆ ಟ್ರೇಲರ್ ಕಟ್ ಮಾಡಿರುವುದು ನನಗೆ ಹಿಡಿಸಿತು. ಈ ಸಿನಿಮಾದಲ್ಲಿ ವಿಭಿನ್ನತೆ ಇದೆ. ಎಲ್ಲಾ ವಿಭಾಗಗಳ ಕೆಲಸವು ಅದ್ಭುತವಾಗಿದೆ. ಕನ್ನಡ ಇಂಡಸ್ಟ್ರಿ ನಡೆಯುತ್ತಿರುವ ದಾರಿಯ ಬಗ್ಗೆ ನನಗೆ ಹೆಮ್ಮೆ ಇದೆ” ಎಂದರು. ಇದೇ ನವೆಂಬರ್ ೨೨ಕ್ಕೆ ಬಿಡುಗಡೆಗೆ ಸಜ್ಜಾಗಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರದ ಟ್ರೇಲರಿಗೆ ಎಲ್ಲೆಡೆ […]

ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಎರಡನೇ ಭಾಗಕ್ಕೆ ಚಾಲನೆ‌

ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಆರಾಧನಾ ಪರ್ವಕಾಲದಲ್ಲಿ “ದಾಸವರೇಣ್ಯ ಶ್ರೀ ವಿಜಯದಾಸರು ಭಾಗ ೨” ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ಶ್ರೀಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ವಿದ್ವಾನ್ ಶ್ರೀಸತ್ಯಧ್ಯಾನಾಚಾರ್ಯ ಕಟ್ಟಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಶ್ರೀಮತಿ ತೇಜಸ್ವಿನಿ ಅನಂತ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.‌ ಇತ್ತೀಚೆಗಷ್ಟೇ ಟಿಟಿಡಿ ಸದಸ್ಯರಾಗಿ ಆಯ್ಕೆಯಾಗಿರುವ ನರೇಶ್ ಕುಮಾರ್ ಹಾಗೂ ಖ್ಯಾತ ಗಮಕ ಕಲಾವಿದರಾದ ಪ್ರಸನ್ನ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮುಹೂರ್ತ ಸಮಾರಂಭದ […]

“ಸಮೃದ್ಧಿ ರಂಗತಂಡ”ಕ್ಕೆ ಚಾಲನೆ

“ಸಮೃದ್ಧಿ ರಂಗತಂಡ”ಕ್ಕೆ ಫಿಲಂ‌ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್  ಮತ್ತು ತನಿಷಾ ಕುಪ್ಪಂಡ  ಅವರಿಂದ ಚಾಲನೆ READ MORE ; ಜಸ್ ಕರಣ್ ಸಿಂಗ್ ಧ್ವನಿಯಾದ ಹಾಡಿನೊಂದಿಗೆ ಎದೆಗಿಳಿದ ಅಂಶು! ಚಿತ್ರರಂಗ, ರಂಗಭೂಮಿ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ಕಲಾವಿದ, ತಂತ್ರಜ್ಞರಾಗಲು, ಅದಕ್ಕೆ ಸೂಕ್ತ ತರಬೇತಿ ಪಡೆಯುವುದು ಅವಶ್ಯಕ. ಹಾಗೆ ಮನರಂಜನಾ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕೆನ್ನುವವರಿಗೆ ತರಬೇತಿ, ಮಾರ್ಗದರ್ಶನ ನೀಡಲೆಂದೇ ನಗರದಲ್ಲಿ ಸಮೃದ್ಧಿ ರಂಗತಂಡ ಪ್ರಾರಂಭವಾಗಿದೆ.ಜಾಲಹಳ್ಳಿ, ಬಾಣಾವರ, ಹೆಸರುಘಟ್ಟ, ನೆಲಮಂಗಲ, ಯಶವಂತಪುರ, ಮತ್ತೀಕೆರೆ ಸುತ್ತಮುತ್ತಲಿನ ಸಿನಿಮಾಸಕ್ತರಿಗಾಗಿಯೇ ಸಮೃದ್ಧಿ ರಂಗತಂಡದ ಚಂದನ್ ಬಿ. ಹಾಗೂ […]

Translate »