# Tags

‘Sky Force’ ಮೂರು ದಿನಗಳಲ್ಲಿ ಅಕ್ಷಯ್ ಕುಮಾರ್ ಅಭಿನಯದ ಚಿತ್ರ ಗಳಿಸಿದ್ದೆಷ್ಟು?

ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಮತ್ತು ಹೊಸಬರಾದ ವೀರ್ ಪಹಾರಿಯಾ ನಟನೆಯ ‘ಸ್ಕೈ ಫೋರ್ಸ್’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲಿ ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ 92.90 ಕೋಟಿ ರೂ. ಗಳಿಸಿದೆ. ಭಾರತದ ಮೊದಲ ಮತ್ತು ಅತ್ಯಂತ ಮಾರಕ ವೈಮಾನಿಕ ದಾಳಿಯ ಕಥೆಯನ್ನು ಒಳಗೊಂಡಿರುವ ಸ್ಕೈ ಫೋರ್ಸ್ ಚಿತ್ರವು ಶುಕ್ರವಾರ (ಜನವರಿ 24) ದಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.   ಚಿತ್ರವನ್ನು ಸಂದೀಪ್ ಕೆವ್ಲಾನಿ ಮತ್ತು ಅಭಿಷೇಕ್ ಕಪೂರ್ ನಿರ್ದೇಶಿಸಿದ್ದು, ಪ್ರೊಡಕ್ಷನ್ ಬ್ಯಾನರ್ ಮ್ಯಾಡಾಕ್ ಫಿಲ್ಮ್ಸ್ […]

ಶಾರುಖ್‌ ಖಾನ್‌ಗೆ ವಯಸ್ಸೇ ಆಗಲ್ವಾ ಅಂತಿದ್ದಾರೆ ಫ್ಯಾನ್ಸ್‌..!

ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅದೇ ರೀತಿ ಅವರ ವಯಸ್ಸು ಕೂಡ ಹೆಚ್ಚುತ್ತಿದೆ. ಅವರು ಇತ್ತೀಚೆಗೆ ದುಬೈಗೆ ತೆರಳಿ ‘ಗ್ಲೋಬಲ್ ವಿಲೇಜ್​’ನಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ವೇದಿಕೆ ಮೇಲೆ ಅವರು ಸಾಂಗ್ ಒಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ. ಈ ಈವೆಂಟ್​ನ ವಿಡಿಯೋ ವೈರಲ್ ಆಗಿದೆ. ಅವರು ‘ಯೂತ್​ಫುಲ್ ಲುಕ್​’ ಬಗ್ಗೆ ಮಾತನಾಡಿ ಗಮನ ಸೆಳೆದಿದ್ದಾರೆ. ಶಾರುಖ್ ಖಾನ್ ಅವರಿಗೆ ವಯಸ್ಸು ದಿನ ಕಳೆದಂತೆ […]

ನನ್ನ ಕೆಲಸ ಹೋಗಲು ಸೈಫ್ ಅಲಿ ಖಾನ್ ಕಾರಣ : ಆಕಾಶ್ ಕನೋಜಿಯಾ

ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆದ ನಂತರ ಸಂಚಲನ ಸೃಷ್ಟಿಯಾಗಿತ್ತು. ಸ್ಟಾರ್ ಮನೆಗೆ ತೆರಳಿ ಚೂರಿ ಚುಚ್ಚುವುದು ಅಂದರೆ ಸಾಮಾನ್ಯ ಮಾತಾ ? ಪೊಲೀಸರ ಮೇಲೆ ಕೂಡ ಗಂಟೆ ಉರುಳಿದಂತೆ ಒತ್ತಡ ಹೆಚ್ಚಾಗಲು ಶುರುವಾಯ್ತು. ಹೀಗಾಗಿಯೇ ಹಿಂದೆ-ಮುಂದೆ ನೋಡದ ಪೊಲೀಸರು ಆಕಾಶ್ ಕನೋಜಿಯಾ ಎಂಬ ವ್ಯಕ್ತಿಯನ್ನು ಬಂಧಿಸಿದರು. ಮರು ಮಾತನಾಡುವ ಅವಕಾಶವನ್ನು ಕೂಡ ನೀಡದೆ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದರು. ಸಾಲದಕ್ಕೆ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದ್ದು ಇದೇ ವ್ಯಕ್ತಿಯೆಂದು ಫೋಟೊವನ್ನು […]

ಪದ್ಮಭೂಷಣ ಅನಂತ್ ನಾಗ್‌ಗೆ ಶುಭ ಕೋರಿದ ಅಲ್ಲು ಅರ್ಜುನ್

ಕನ್ನಡದ ನಟ ಅನಂತ ನಾಗ್ ಹಾಗೂ ತೆಲುಗಿನ ನಟ ನಂದಮೂರಿ ಬಾಲಕೃಷ್ಣರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ಇವರಿಬ್ಬರೂ ತಮ್ಮ ತಮ್ಮ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಆದರೆ, ಇದಕ್ಕೆ ಸ್ವತಃ ಅನಂತ ನಾಗ್ ಅವರಿಗೆ ಅಲ್ಲು ಅರ್ಜುನ್ ಶುಭಾಶಯ ತಿಳಿಸಿದ್ದಾರೆ. ಬಾಲಯ್ಯಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ, ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ತಮ್ಮದೇ ಶೈಲಿಯಲ್ಲಿ ಬಾಲಯ್ಯಗೆ ಶುಭಾಶಯ […]

56 ದಿನಗಳ ಬಳಿಕ ಓಟಿಟಿಗೆ ‘ಪುಷ್ಪ 2’

ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾ ‘ಪುಷ್ಪ 2’ ಬಾಕ್ಸಾಫೀಸ್‌ ಅನ್ನೇ ಉಡಾಯಿಸಿತ್ತು. ‘ಬಾಹುಬಲಿ 2’, ‘ಕೆಜಿಎಫ್ 2’ ಬಾಕ್ಸಾಫೀಸ್ ದಾಖಲೆಗಳನ್ನು ಉಡೀಸ್ ಮಾಡಿತ್ತು. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದರು. 2024 ಡಿಸೆಂಬರ್ ತಿಂಗಳಿನಲ್ಲಿ ತೆರೆಕಂಡಿದ್ದ ‘ಪುಷ್ಪ 2’ ಇನ್ನೂ ಚಿತ್ರಮಂದಿರದಲ್ಲಿ ಸದ್ದು ಮಾಡುತ್ತಿರುವಾಗಲೇ ಓಟಿಟಿ ರಿಲೀಸ್ ಬಗ್ಗೆ ಸುದ್ದಿಯಾಗುತ್ತಿದೆ.ಡಿಸೆಂಬರ್ 5 ರಂದು ರಿಲೀಸ್ ಆಗಿದ್ದ ‘ಪುಷ್ಪ 2’ ಬರೋಬ್ಬರಿ 56 ದಿನಗಳವರೆಗೂ ಓಟಿಟಿಯಲ್ಲಿ ರಿಲೀಸ್ ಆಗುವುದಿಲ್ಲ ಎಂದು […]

BBK 11:  ಟ್ರೋಫಿ ಗೆದ್ದ ಬಳಿಕ ಹನುಮಂತನ ಹೇಳಿದ್ದೇನು?

ಬಿಗ್ ಬಾಸ್ ಕನ್ನಡ ಗ್ರ್ಯಾಂಡ್ ಫಿನಾಲೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ರೋಚಕ ಘಟ್ಟ ತಲುಪಿದ್ದ ಬಿಗ್ ಬಾಸ್ ಫಿನಾಲೆಯಲ್ಲಿ ಕೊನೆಯಲ್ಲಿ ಮೂವರು ಸ್ಪರ್ಧಿಗಳು ಉಳಿದುಕೊಂಡಿದ್ದರು. ರಜತ್, ತ್ರಿವಿಕ್ರಮ್ ಹಾಗೂ ಹನುಮಂತ ಬಿಗ್ ಬಾಸ್ ಫಿನಾಲೆ ತಲುಪಿದ್ದರು. ಈ ಮೂವರಲ್ಲಿ ಯಾರು ಗೆಲ್ಲೋರು? ಅನ್ನೋ ಕುತೂಹಲ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಲೇ ಇತ್ತು. ಕೊನೆಗೂ ಹನುಮಂತ ಬಿಗ್ ಬಾಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾನೆ. ನಾಲ್ಕನೇ ವಾರದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟು ಬಿಗ್ ಮನೆಯನ್ನು ಪ್ರವೇಶಿಸಿದ್ದ ಹನುಮಂತ ಮೊದಲಿನಿಂದಲೂ ವೀಕ್ಷಕರ ಫೇವರಿಟ್ ಆಗಿದ್ದ. […]

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣಗೊಂಡ “#ಪಾರು ಪಾರ್ವತಿ” ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .

  ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ* . EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ […]

ಸದ್ದಿಲ್ಲದೆ ಮುಕ್ತಾಯವಾಯಿತು ಕಲಾಸಾಮ್ರಾಟ್  ದುನಿಯಾ ವಿಜಯ್ ಅಭಿನಯದ “ಮಾರುತ” ಚಿತ್ರದ ಚಿತ್ರೀಕರಣ

  ಬಹು ನಿರೀಕ್ಷಿತ ಈ ಚಿತ್ರಕ್ಕೆ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣ ಕನ್ನಡದಲ್ಲಿ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಶ್ರೇಯಸ್ ಕೆ ಮಂಜು ಅಭಿನಯಿಸಿರುವ ಚಿತ್ರ “ಮಾರುತ”. ಖ್ಯಾತ ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ಅವರು ಈಶಾ ಪ್ರೊಡಕ್ಷನ್ಸ್ ಮೂಲಕ ಜಂಟಿಯಾಗಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಅಪಾರ ವೆಚ್ಚದಲ್ಲಿ […]

‘ಸೀಟ್ ಎಡ್ಜ್’ನಲ್ಲಿ ಕುಳಿತ ಸಿದ್ದು ಮೂಲಿಮನಿ…..ಫೆಬ್ರವರಿ 7ಕ್ಕೆ ಸಿನಿಮಾದ ಮೊದಲ ಹಾಡು ರಿಲೀಸ್

    ಪ್ರೇಕ್ಷಕರನ್ನು ಸೀಟ್ ನ ಎಡ್ಜ್ ಗೆ ಕೂರಿಸುವಂತಹ ಸಿನಿಮಾ ಮಾಡಬೇಕು ಅನ್ನೋದು ಪ್ರತಿಯೊಬ್ಬ ನಿರ್ದೇಶಕರ ಕನಸು. ಇದೇ ಸೀಟ್ ಎಡ್ಜ್ ಎಂಬ ಟೈಟಲ್ ಇಟ್ಕೊಂಡು ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಸದ್ದಿಲ್ಲದೇ ಚಿತ್ರದ ಶೂಟಿಂಗ್ ಕೂಡ ಮುಕ್ತಾಯಗೊಂಡಿದ್ದು, ಸೀಟ್ ಎಡ್ಜ್ ಸಿನಿಮಾವೂ ಈಗ ಬಿಡುಗಡೆ ಹಂತಕ್ಕೆ ಬಂದಿದೆ. ಕಿರುತೆರೆ ಲೋಕದಲ್ಲಿ ಒಂದಷ್ಟು ಹೆಸರು ಮಾಡಿರುವ ಸಿದ್ದು ಮೂಲಿಮನಿ ಸೀಟ್ ಎಡ್ಜ್ ಸಿನಿಮಾದ ನಾಯಕ. ರವೀಕ್ಷಾ ಶೆಟ್ಟಿ ಚಿತ್ರದ ನಾಯಕಿ. ಡಾರ್ಕ್ ಕಾಮಿಡಿಗೆ ಹಾರರ್ ಥ್ರಿಲ್ಲರ್ ಟಚ್ […]

ಸೆಟ್ಟೇರಿತು ‘ಲಕ್ಷ್ಮೀಪುತ್ರ’..ಇದು ಎಪಿ ಅರ್ಜುನ್ ಹಾಗೂ ಚಿಕ್ಕಣ್ಣ ಕಾಂಬೋದ ಹೊಸ ಸಿನಿಮಾ

    ಉಪಾಧ್ಯಕ್ಷ ಬಳಿಕ ಚಿಕ್ಕಣ್ಣ ಸೋಲೋ ಹೀರೋ ಆಗಿ ನಟಿಸುತ್ತಿರುವ ಹೊಸ ಸಿನಿಮಾ ಲಕ್ಷ್ಮೀಪುತ್ರ.. ಎಪಿ ಅರ್ಜುನ್ ತಮ್ಮದೇ ನಿರ್ಮಾಣ ಸಂಸ್ಥೆ ಎಪಿ ಅರ್ಜುನ್ ಫಿಲಂಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ನಿನ್ನೆ ಶುಕ್ರವಾರದಂದು ನಾಗರಭಾವಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ನೆರವೇರಿದೆ. ಅರ್ಜುನ್ ಗೂರೂಜಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಶುಭ ಹಾರೈಸಿದರು. ಬಳಿಕ ನಗರದ ಟಾಪಿಕ್ ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಎಪಿ ಅರ್ಜುನ್ , […]

  • 1
  • 2
Translate »