ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ. ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು. ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಇನ್ನೂ ಒದಿ ಆಂಜನೇಯನ ಗಧೆಯ ಮಹತ್ವ ಹೇಳುವ ಜೈ ಗದಾ ಕೇಸರಿ…
ಐಶ್ವರ್ಯ ಅವರು ಈಗಾಗಲೇ ನಟಿಯಾಗಿ ಜನಪ್ರಿಯರಾಗಿದ್ದು, ಉಮಾಪತಿ ಅವರು ನಟನಾಗಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಉಮಾಪತಿ ಅವರ ತಂದೆ ತಂಬಿ ರಾಮಯ್ಯ ಹೆಸರಾಂತ ಹಾಸ್ಯನಟರಾಗಿ ಜನಮನ್ನಣೆ ಪಡೆದಿದ್ದಾರೆ.

ಇನ್ನೂ ಒದಿ ಹ್ಯಾಟ್ರಿಕ್ ಗೆಲುವಿನಲ್ಲಿ ಡಾಲಿ ಧನಂಜಯ್: ‘ಟಗರು ಪಲ್ಯ’ನೂ ಸೂಪರ್ ಹಿಟ್
ನಿಶ್ಚಿತಾರ್ಥದಲ್ಲಿ ಉಮಾಪತಿ ಹಾಗೂ ಐಶ್ವರ್ಯ ಅವರ ಸುಂದರ ಉಡುಗೆ ಎಲ್ಲರ ಗಮನ ಸೆಳೆಯಿತ್ತು. ಉಮಾಪತಿ ಅವರಿಗೆ ಮನೀಶ್ ಮಲ್ಹೋತ್ರ ಹಾಗೂ ಐಶ್ವರ್ಯ ಅವರಿಗೆ ಜಯಂತಿ ರೆಡ್ಡಿ ಅವರು ವಸ್ತ್ರವಿನ್ಯಾಸ ಮಾಡಿದ್ದರು. ಆಕರ್ಷಕವಾಗಿದ್ದ ರೂಬಿ ಹರಳಿನ ಬಂಗಾರದ ನಿಶ್ಚಿತಾರ್ಥದ ಉಂಗುರಗಳನ್ನು ಜೈಪುರದಿಂದ ತರಿಸಲಾಗಿತ್ತು.

ಇನ್ನೂ ಒದಿ ‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು…ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ
2024 ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರ ಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ.
