ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು ಈ ವರ್ಷ ‘ನಾದಬ್ರಹ್ಮ’ ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು.
ಇದನ್ನೂ ಓದಿ: `ಜೈಲರ್’ನಿಂದಾಗಿ ಬಾಲಿವುಡ್ ಎಂಟ್ರಿ ಕೊಡ್ತಾರಾ ಶಿವಣ್ಣ? ವಿಶೇಷ ಮಾಹಿತಿ ಇಲ್ಲಿದೆ.
ದಸರಾ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.
ಇದನ್ನೂ ಓದಿ: ವೈರಲ್ ಆಯ್ತು ದರ್ಶನ್ ಟ್ವೀಟ್ಸ್, ಹೊರಬೀಳುತ್ತಾ ಟ್ವೀಟ್ಗಳ ಹಿಂದಿನ ಅಸಲಿಯತ್ತು?
ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್ಹೌಸ್ ವೃತ್ತ, ಎಲ್ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು. ಇನ್ನು ವಿಶೇಷವೆಂದರೆ.. `ದಸರಾ ಗೊಂಬೆಯೆ..’ ಸಾಹಿತ್ಯ ಬರೆದವರೇ ದಸರಾ ಉದ್ಘಾಟಿಸುತ್ತಿರುವುದು. ಹೌದು, ದಸರಾ ಗೊಂಬೆ ಹಾಡಿನ ಸಾಹಿತ್ಯ ಬರೆದವರು ಹಂಸಲೇಖ ರವರು ಹಾಗು ಈ ಹಾಡನ್ನು ಹಾಡಿದವರು ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರು. ಈ ಹಾಡು 1995ರಲ್ಲಿ ಬಿಡುಗಡೆಯಾದ ರವಿಚಂದ್ರನ್, ಮೀನಾ, ಉಮಾಶ್ರೀ, ಲೋಕೇಶ್, & ಸತ್ಯಜೀತ್ ಅವರು ನಟಿಸಿದ ಪುಟ್ನಂಜ ಚಿತ್ರದ ಹಾಡಾಗಿದೆ. ದಸರಾ ಗೊಂಬೆ ಹಾಡಿಗೆ ಸಂಗೀತ ಕೊಟ್ಟವರು ಹಂಸಲೇಖ ರವರು. ಪುಟ್ನಂಜ ಚಿತ್ರ ನಿರ್ದೇಶಿಸಿದವರು ರವಿಚಂದ್ರನ್ ಮತ್ತು ನಿರ್ಮಾಪಕರು ರವಿಚಂದ್ರನ್ & ಎ. ನರಸಿಂಹನ್.