1979ರಲ್ಲಿ ಶಂಕರ್ನಾಗ್ ಅಭಿನಯದ ’ಒಂದಾನೊಂದು ಕಾಲದಲ್ಲಿ’ ಚಿತ್ರವೊಂದು ತೆರೆಕಂಡು ಯಶಸ್ಸು ಗಳಿಸಿತ್ತು. ಈಗ ಅದೇ ಹೆಸರಿನಲ್ಲಿ ಚಿತ್ರವೊಂದು ಸಿದ್ದಗೊಂಡಿದೆ. ಹಾಗಂತ ಅದಕ್ಕೂ ಇದಕ್ಕೂ ಸಂಬಂದವಿರುವುದಿಲ್ಲ. ಇದು ಪಕ್ಕಾ ಲವ್ ಸ್ಟೋರಿ ಎಂದು ಅಡಿಬರಹದಲ್ಲಿ ಹೇಳಿಕೊಡಿದೆ. ಹಿರಿಯ ನಿರ್ದೇಶಕ ಭಗವಾನ್ ಬಳಿ ತರಭೇತಿ ಪಡೆದುಕೊಂಡಿರುವ ಎನ್.ಮಂಜುನಾಥ್ ಕಥೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನದ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಆನೇಕಲ್ ಮೂಲದ ಟಿ.ಎಸ್.ಗೋಪಲ್ ಅವರು ಮುನಿ ಲಕ್ಷೀವೆಂಕಟೇಶ್ವರ ಕ್ರಿಯೆಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿರುವುದು ಹೊಸ ಅನುಭವ.
1980ರ ರೆಟ್ರೋದಲ್ಲಿ ನಡೆಯುವ ಕರವಸ್ತ್ರ (ಕರ್ಚಿಫ್)ದ ಮೇಲಿನ ಪ್ರೀತಿ ಕತೆ ಇರಲಿದೆ. ನಾಯಕ ಮತ್ತು ನಾಯಕಿ ಒಬ್ಬರನ್ನೊಬ್ಬರು ಭೇಟಿಯಾಗಿರುವುದಿಲ್ಲ. ಕರವಸ್ತ್ರವು ಇಬ್ಬರ ನಡುವೆ ಆಟವಾಡಿಸುತ್ತಿರುತ್ತದೆ. ಅದು ಇಬ್ಬರನ್ನು ಹೇಗೆ ಸೇರಿಸುತ್ತದೆ. ಪ್ರೀತಿಯ ಸಂದೇಶ ಯಾವ ರೀತಿ ರವಾನೆಯಾಗುತ್ತಿರುತ್ತದೆ ಎಂಬಂತ ವಿಷಯಗಳನ್ನು ಅಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಹೇಳುವ ಪ್ರಯತ್ನ ಮಾಡಲಾಗಿದೆ.
‘ಗಜರಾಮ’ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯ – ಸುನೀಲ್ ಕುಮಾರ್ ವಿ ಎ ನಿರ್ದೇಶನದ ಚೊಚ್ಚಲ ಸಿನಿಮಾ
ಹರ್ಷಲಹನಿ ನಾಯಕಿ. ಇನ್ನುಳಿದಂತೆ ಶೋಭರಾಜ್, ಸಂಗೀತ, ನೀನಾಸಂಅಶ್ವಥ್, ಜಿ.ತರುಣ್ಕುಮಾರ್ ಮುಂತಾದವರು ನಟಿಸಿದ್ದಾರೆ. ಪ್ರಶಾಂತ್ಹೊನ್ನಾವರ ಸಾಹಿತ್ಯದ ನಾಲ್ಕು ಗೀತೆಗಳಿಗೆ ಯಶವಂತ್ಭೂಪತಿ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಏಳುಕೋಟೆಚಂದ್ರು, ಸಂಕಲನ ಸೆಲ್ವರಾಜು-ವಿನೋಧ್, ಸಾಹಸ ಅಲ್ಟಿಮೇಟ್ಶಿವು, ನೃತ್ಯ ರಾಜ್-ಮಂಜು ಅವರದು. ಕನಕಪುರ, ಹಾರೋಹಳ್ಳಿ,ಆನೇಕಲ್, ತಟ್ಟಗೆರೆ, ಹೂಕ್ಲೇರಿ, ಸಕಲೇಶಪುರ ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ.
‘ಕಂಬ್ಳಿಹುಳ’ ಸಿನಿಮಾ ನೋಡಿ ನಿರ್ದೇಶಕ ಸಿಂಪಲ್ ಸುನಿ ಫಿಧಾ- ಪ್ರೇಕ್ಷಕರಿಗೆ ಹೊಸ ಆಫರ್ ಘೋಷಣೆ
ಪ್ರಚಾರದ ಕೊನೆ ಹಂತವಾಗಿ ಸಿರಿ ಮ್ಯೂಸಿಕ್ ಸಂಸ್ಥೆಯು ಹೊರ ತಂದಿರುವ ಹಾಡುಗಳ ಬಿಡುಗಡೆ ಕಾರ್ಯಕ್ರಮ ಮೊನ್ನೆಯಷ್ಟೇ ನಡೆಯಿತು. ಸೆನ್ಸಾರ್ನಿಂದ ಪ್ರಶಂಸೆಗೆ ಒಳಪಟ್ಟು ’ಯು’ ಪ್ರಮಾಣ ಪತ್ರ ಪಡೆದುಕೊಂಡಿರುವ ಚಿತ್ರವು ವಿತರಕ ರಮೇಶ್ ಮುಖಾಂತರ ಸದ್ಯದಲ್ಲೆ ತೆರೆಗೆ ಬರುವ ಸಾಧ್ಯತೆ ಇದೆ.