Left Ad
2020 ರಾಜ್ಯ ಪ್ರಶಸ್ತಿ : ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ - Chittara news
# Tags

2020 ರಾಜ್ಯ ಪ್ರಶಸ್ತಿ : ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ

ಡೈನಾಮಿಕ್ ಪ್ರಿನ್ಸ್‌’ ಪ್ರಜ್ವಲ್ ದೇವರಾಜ್ ಅವರಿಗೆ ‘ಜಂಟಲ್‌ಮನ್‌’ ಸಿನಿಮಾದ ನಟನೆಗಾಗಿ ‘ಅತ್ಯುತ್ತಮ ನಟ’ ಮತ್ತು ಅಕ್ಷತಾ ಪಾಂಡವಪುರ ಅವರಿಗೆ ‘ಪಿಂಕಿ ಎಲ್ಲಿ’ ಚಿತ್ರದ ಅಭಿನಯಕ್ಕಾಗಿ ‘ಅತ್ಯುತ್ತಮ ನಟಿ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಬಿ ಎಸ್ ಲಿಂಗದೇವರು ನೇತೃತ್ವದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯು 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಪೃಥ್ವಿ ಕೊಣನೂರು ನಿರ್ದೇಶನ ಮಾಡಿ, ಕೃಷ್ಣೇಗೌಡ ನಿರ್ಮಾಣ ಮಾಡಿದ್ದ ‘ಪಿಂಕಿ ಎಲ್ಲಿ’ ಚಿತ್ರಕ್ಕೆ ‘ಪ್ರಥಮ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಲಭಿಸಿದೆ.

 

“2020ರಲ್ಲಿ ಸೆನ್ಸಾರ್ ಪ್ರಮಾಣ ಪತ್ರ ಪಡೆದ 71 ಸಿನಿಮಾಗಳ ಪೈಕಿ 66 ಚಿತ್ರಗಳನ್ನು ವೀಕ್ಷಿಸಲಾಯಿತು. ತಾಂತ್ರಿಕ ಕಾರಣಗಳಿಂದ ಕೆಲವು ಚಿತ್ರಗಳನ್ನು ವೀಕ್ಷಿಸಲು ಸಾಧ್ಯವಾಗಲಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ, ಕೇವಲ ಮನೋರಂಜನೆಯಾಗಿಯೇ ಸಿನಿಮಾವನ್ನು ನೋಡದೆ, ಸಿನೆಮಾ ಸಮಾಜದ ಮೇಲೆ ಪ್ರಭಾವ ಬೀರುವ ಪ್ರಭಲ ಮಾಧ್ಯಮ. ಹಾಗೂ ಕಲೆ ಮತ್ತು ಉದ್ಯಮ ಎರಡನ್ನೂ ಪ್ರತಿನಿಧಿಸುವ ಕಲೋದ್ಯಮ ಎಂಬ ನಿಲುವಿನಿಂದ ವಿಮರ್ಶಿಸಲಾಯಿತು. ವಿಭಿನ್ನ ವಸ್ತು, ನೂತನ ನಿರೂಪಣಾ ಶೈಲಿ, ಪಾತ್ರ ಪೋಷಣೆ, ತಂತ್ರಜ್ಞರ ಹೊಸ ಪ್ರಯತ್ನಗಳು, ಕಲಾವಿದರ ನೈಜ ಅಭಿನಯ —ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಅವಲೋಕಿಸಿ ಮತ್ತು ಚರ್ಚಿಸಿದ ನಂತರ ಸರಕಾರಕ್ಕೆ ವಿವಿಧ ವಿಭಾಗಕ್ಕೆ ಪ್ರಶಸ್ತಿಗಳನ್ನು ಶಿಫಾರಸು ಮಾಡಲಾಗಿದೆ” ಎಂದು ನಿರ್ದೇಶಕ ಬಿ. ಎಸ್. ಲಿಂಗದೇವರು ತಿಳಿಸಿದ್ದಾರೆ.

 

 

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ

ಸುಬ್ಬಯ್ಯ ನಾಯ್ಡು ಪ್ರಶಸ್ತಿ (ಅತ್ಯುತ್ತಮ ನಟ) : ಪ್ರಜ್ವಲ್‍ ದೇವರಾಜ್‍ (ಜಂಟಲ್‌ಮನ್)
ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)
ಅತ್ಯುತ್ತಮ ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ (ನಿರ್ದೇಶನ: ಪೃಥ್ವಿ ಕೊಣನೂರು)
2ನೇ ಅತ್ಯುತ್ತಮ ಚಿತ್ರ: ವರ್ಣಪಟಲ (ನಿರ್ದೇಶನ: ಚೇತನ್ ಮುಂಡಾಡಿ)
3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು (ನಿರ್ದೇಶನ: ಬಾಬು ಈಶ್ವರ್ ಪ್ರಸಾದ್)
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು (ನಿರ್ದೇಶನ: ರಾಮದಾಸ ನಾಯ್ಡು & ಶಿವಧ್ವಜ್ ಶೆಟ್ಟಿ)
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ (ನಿರ್ದೇಶನ: ಸಂಗಮೇಶ ಎಸ್ ಸಜ್ಜನರ್)
ಅತ್ಯುತ್ತಮ ಮಕ್ಕಳ ಚಿತ್ರ: ಪದಕ (ನಿರ್ದೇಶನ: ಆದಿತ್ಯ ಆರ್ ಚಿರಂಜೀವಿ)
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ (ನಿರ್ದೇಶನ: ಗಣೇಶ್‍ ಹೆಗ್ಡೆ)
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಜೀಟಿಗೆ (ತುಳು ಭಾಷೆ, ನಿರ್ದೇಶನ: ಸಂತೋಷ್ ಮಾಡ)

 

ಕೆ ಎಸ್ ಅಶ್ವಥ್ ಪ್ರಶಸ್ತಿ (ಅತ್ಯುತ್ತಮ ಪೋಷಕ ನಟ) : ರಮೇಶ್‍ ಪಂಡಿತ್‍ (ತಲೆದಂಡ)
ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ (ದಂತಪುರಾಣ)
ಅತ್ಯುತ್ತಮ ಕಥೆ: ಶಶಿಕಾಂತ್‍ ಗಟ್ಟಿ (ರಾಂಚಿ)
ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್‍ (ಚಾಂದಿನಿ ಬಾರ್)
ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ (ಹೂವಿನ ಹಾರ)
ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್‍ (ತಲೆದಂಡ)
ಅತ್ಯುತ್ತಮ ಸಂಗೀತ ನಿರ್ದೇಶನ: ಗಗನ್‍ ಬಡೇರಿಯಾ (ಮಾಲ್ಗುಡಿ ಡೇಸ್‍)
ಅತ್ಯುತ್ತಮ ಸಂಕಲನ: ನಾಗೇಂದ್ರ ಕೆ. (ಆ್ಯಕ್ಟ್ 1978)

ಅತ್ಯುತ್ತಮ ಬಾಲನಟ: ಅಹಿಲ್‍ ಅನ್ಸಾರಿ (ದಂತ ಪುರಾಣ)
ಅತ್ಯುತ್ತಮ ಬಾಲನಟಿ: ಬೇಬಿ ಹಿತೈಷಿ ಪೂಜಾರ್‍ (ಪಾರು)
ಅತ್ಯುತ್ತಮ ಕಲಾ ನಿರ್ದೇಶನ: ಗುಣಶೇಖರ್ (ಬಿಚ್ಚುಗತ್ತಿ)
ಅತ್ಯುತ್ತಮ ಗೀತ ರಚನೆ: ಗಾರ್ಗಿ ಕಾರೆಹಕ್ಲು (‘ಪರ್ಜನ್ಯ’ ಚಿತ್ರದ ‘ಮೌನವು ಮಾತಾಗಿದೆ’) ಮತ್ತು ಸಚಿನ್‍ ಶೆಟ್ಟಿ ಕುಂಬ್ಳೆ (‘ಈ ಮಣ್ಣು’ ಚಿತ್ರದ ‘ದಾರಿಯೊಂದು ಹುಡುಕುತ್ತಿದೆ’
ಅತ್ಯುತ್ತಮ ಹಿನ್ನೆಲೆ ಗಾಯಕ: ಅನಿರುದ್ಧ್ ಶಾಸ್ತ್ರಿ (ಆಚಾರ್ಯ ಶ್ರೀ ಶಂಕರ)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಅರುಂಧತಿ ವಸಿಷ್ಠ (ದಂತ ಪುರಾಣ)

ತೀರ್ಪುಗಾರರ ವಿಶೇಷ ಪ್ರಶಸ್ತಿ: ಸಂಚಾರಿ ವಿಜಯ್‍ (ನಟನೆಗಾಗಿ – ಮರಣೋತ್ತರವಾಗಿ),
ಅತ್ಯುತ್ತಮ ವಸ್ತ್ರ ವಿನ್ಯಾಸ: ಶ್ರೀ ವಲ್ಲಿ (ಚಿತ್ರ: ಸಾರವಜ್ರ)
ಅತ್ಯುತ್ತಮ ಪ್ರಸಾಧನ: ರಮೇಶ್‍ ಬಾಬು (ಚಿತ್ರ: ತಲೆದಂಡ)
ಅತ್ಯುತ್ತಮ ಶಬ್ಧಗ್ರಹಣ: ವಿ.ಜಿ. ರಾಜನ್ (ಚಿತ್ರ: ಅಮೃತ್‍ ಅಪಾರ್ಟ್‍ಮೆಂಟ್ಸ್)
ತೀರ್ಪುಗಾರರ ವಿಶೇಷ ಪ್ರಶಸ್ತಿ (ಪ್ರಮಾಣ ಪತ್ರ): ವಿಶ್ವಾಸ್‍ ಕೆ.ಎಸ್ (ವಿಶೇಷಚೇತನ ನಟ – ಅರಬ್ಬೀ)
ಅತ್ಯುತ್ತಮ ನಿರ್ಮಾಣ ನಿರ್ವಾಹಕ: ಚಂಪಕಧಾಮ ಬಾಬು (ಕನ್ನಡಿಗ)

Spread the love
Translate »
Right Ad