Sandalwood Leading OnlineMedia

ಕೋರ್ಟ್ ಡ್ರಾಮ ಜಾನರ್ ನ “ಯಥಾಭವ” ಚಿತ್ರಕ್ಕೆ ಸೆನ್ಸಾರ್ ಅಸ್ತು .

ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಮೂಲಕ “ಯಥಾಭವ” ಜನರ ಮನ ಗೆದ್ದಿದೆ.

ಇದನ್ನೂ ಓದಿ  ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್,ಮತ್ಸ್ಯಗಂಧದಿಂದ ಸಿನಿಮಾ ಪ್ರಯೋಗ

ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದತ್ತಣ್ಣ, ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಇದನ್ನೂ ಓದಿ ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಧ್ವನಿಸುರಳಿ

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ ಹಾಗೂ ಸ್ಮಿತ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

Share this post:

Related Posts

To Subscribe to our News Letter.

Translate »